Close

ಅಕ್ಷರ ದಾಸೋಹ

ಪೀಠಿಕೆ :

ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಒಪ್ಪಂದದಲ್ಲಿ ಘೋಷಿಸಲ್ಪಟ್ಟಿರುವಂತೆ ಪ್ರತಿಯೊಬ್ಬ ಹಸಿದ ಮಗುವಿಗೂ ಆಹಾರವನ್ನು ಒದಗಿಸಬೇಕಾಗಿದೆ. ಮಧ್ಯಾಹ್ನ ಉಪಹಾರ ಯೋಜನೆಯು ಒಂದು ಪ್ರತಿಷ್ಠಿತ ಯೋಜನೆಯಾಗಿದ್ದು, ಮಕ್ಕಳು ಆರೋಗ್ಯಪೂರ್ಣವಾಗಿ ಶಕ್ತಿವಂತರು ಹಾಗೂ ದೃಢಕಾಯರಾಗಿ ಬೆಳೆಯಲು ಒಂದು ಸದವಕಾಶ ಕಲ್ಪಿಸುವ ಬದ್ಧತೆಯಿಂದ ಕೂಡಿದ್ದು, ಸಹಕಾರಿಯಾಗಿದೆ. ಸದರಿ ಕಾರ್ಯಕ್ರಮದ ಪ್ರಮುಖ ಉದ್ದೇಶವು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಸಿವು ನೀಗಿಸಿ ತನ್ಮೂಲಕ ಅವರ ಕಲಿಕಾ ಸಾಮರ್ಥ್ಯಗಳನ್ನೂ ಮತ್ತು ಸಾಧನೆಗಳನ್ನು ಹೆಚ್ಚಿಸುವುದಾಗಿದೆ.

ದೂರ ದೃಷ್ಠಿ:

  • ಪೌಷ್ಠಿಕಾಂಶ ಹೆಚ್ಚಿಸುವುದರ ಮೂಲಕ ಶಾಲಾ ಮಕ್ಕಳ ಆರೋಗ್ಯವನ್ನು ಅಭಿವೃದ್ಧಿಗೊಳಿಸುವುದು.
  • ಸಾಮಾಜಿಕ ಸಮಾನತೆಯನ್ನು ಅಭಿವೃದ್ಧಿ ಪಡಿಸಿ ತನ್ಮೂಲಕ ರಾಷ್ಟ್ರೀಯ ಭಾವೈಕ್ಯತೆಯನ್ನು ಮಕ್ಕಳಲ್ಲಿ ಮೂಡಿಸುವುದು.

ಗುರಿ:

  • ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸುವುದು.
  • ಶೈಕ್ಷಣಿಕ ವರ್ಷದಲ್ಲಿ ಮಧ್ಯೆ ಮಧ್ಯೆ ಶಾಲೆಯನ್ನು ತೊರೆಯದಂತೆ ತಡೆಯುವುದು.
  • ಶಾಲಾ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ಬರಪೀಡಿತ ಪ್ರದೇಶಗಳಿಗೆ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ನೀಡಲಾಗುತ್ತಿದೆ.

ಹೊಣೆಗಾರಿಕೆಗಳು /ಜವಾಬ್ದಾರಿಗಳು

ಶಾಲಾ ಹಂತದಲ್ಲಿ ಎಸ್.ಡಿ.ಎಂ.ಸಿ.,ಯವರು ಹಾಗೂ ಮುಖ್ಯ ಅಡುಗೆಯವರು ಕಾರ್ಯಕ್ರಮದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ನಿರ್ದೇಶನ ಹಾಗೂ ಮಾರ್ಗದರ್ಶಿ ಸೂಚನೆಯಂತೆ ತಾಯಿಯಂದಿರ ಸಮಿತಿಯನ್ನು ಶಾಲೆಗಳಲ್ಲಿ ರಚಿಸಲಾಗಿದ್ದು, ಪ್ರತಿ ದಿನವೂ ಒಬ್ಬ ವಿದ್ಯಾರ್ಥಿಯ ತಾಯಿ ಅಡುಗೆಯ ಮೇಲ್ವಿಚಾರಣೆ ಹಾಗೂ ಊಟದ ರುಚಿ ನೋಡಿ ಬಡಿಸುವುದರಲ್ಲಿ ಪಾಲ್ಗೊಳ್ಳುವುದರ ಮೂಲಕ ಮಕ್ಕಳು ತಮ್ಮ ಮನೆಯ ವಾತಾವರಣದಂತೆ ಭಾವಿಸಿಕೊಂಡು ವರಾಂಡದಲ್ಲಿ/ಕೋಣೆಯಲ್ಲಿ ಕುಳ್ಳಿರಿಸಿ ಮುಖ್ಯ ಶಿಕ್ಷಕರು/ಶಿಕ್ಷಕರ ಉಸ್ತುವಾರಿ ಊಟ ನೀಡಲಾಗುತ್ತದೆ. ಊಟಕ್ಕೆ ಮುಂಚೆ ಶಿಕ್ಷಕರು ಕಡ್ಡಾಯವಾಗಿ ರುಚಿ ನೋಡಿ, ರುಚಿ ಪುಸ್ತಕದಲ್ಲಿ ದಾಖಲಿಸಲಾಗುತ್ತಿದೆ. ಊಟಕ್ಕೆ ಮುಂಚೆ ಮತ್ತು ನಂತರ ಸೋಪು ಬಳಸಿ ಕೈ ತೊಳೆಯುವ ಉತ್ತಮ ಅಭ್ಯಾಸವನ್ನು ರೂಢಿಸಲಾಗಿದೆ. ಮುಖ್ಯ ಶಿಕ್ಷಕರು ಹಾಗೂ ತರಗತಿ ಶಿಕ್ಷಕರು/ದೈಹಿಕ ಶಿಕ್ಷಕರು /ಊಟದ ವೇಳೆಯಲ್ಲಿ ಕಡ್ಡಾಯವಾಗಿ ಊಟದ ವಿತರಣೆಯ ಉಸ್ತುವಾರಿ ವಹಿಸಿ, ಯಾವುದೇ ಸಮಸ್ಯೆಯಿಲ್ಲದಂತೆ ಮಕ್ಕಳು ಊಟ ಪಡೆಯುವಂತೆ ಕ್ರಮ ವಹಿಸುವುದು. ಅನುಪಯುಕ್ತ ಹಳೆಯ ವಸ್ತುಗಳನ್ನು ತೆಗೆದು ಹಾಕುವುದು. ಕಾರ್ಯಕ್ರಮದ ಬಗ್ಗೆ ನಿರಂತರ ಗಮನ ಹರಿಸುವುದು. ಅಡುಗೆಯವರು ಅಡುಗೆ ತಯಾರಿಸುವ ಹಾಗೂ ಬಡಿಸುವಾಗ ಏಪ್ರಾನ್ ಬಳಸುವುದು. ನೀರು ಹಾಗೂ ಆಹಾರ ಧಾನ್ಯ, ತರಕಾರಿಗಳ ಸ್ವಚ್ಛತೆ ಬಗ್ಗೆ ನಿಗಾ ವಹಿಸುವುದು. ಶಾಲಾ ಎಸ್.ಡಿ. ಎಂ.ಸಿ.,ಸಭೆಗಳಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಖರ್ಚು ವೆಚ್ಚದ ಬಗ್ಗೆ ಪರಿಶೀಲಿಸಿ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ವಿವರಗಳನ್ನು ದಾಖಲಿಸುತ್ತದೆ ಹಾಗೂ ಶಾಲೆಗೆ ಭೇಟಿ ನೀಡಿರುವ ಅಧಿಕಾರಿಗಳು ಕಡ್ಡಾಯವಾಗಿ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನದ ಬಗ್ಗೆ ಪರಿಶೀಲಿಸಿ ವರದಿಯಲ್ಲಿ ದಾಖಲಿಸಬೇಕಾಗಿರುತ್ತದೆ..

ಶಾಲಾ ಮಟ್ಟದಲ್ಲಿ ಸುರಕ್ಷತೆ :

ಮಧ್ಯಾಹ್ನ ಉಪಹಾರ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ ಮಕ್ಕಳ ಭೌತಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಕಾಯ್ರಕ್ರಮದ ಅನುಷ್ಡಾನದಲ್ಲಿ ಹೆಚ್ಚಿನ ಕಾಳಜಿ, ಜವಾಬ್ದಾರಿ ವಹಿಸುವುದು ಎಲ್ಲಾ ಸ್ಥರದ ಅಧಿಕಾರಿ/ಸಿಬ್ಬಂದಿಯವರ ಜವಾಬ್ದಾರಿಯಾಗಿದ್ದು, ಸುತ್ತೋಲೆ/ಆದೇಶ/ಮಾರ್ಗಸೂಚಿಗಳಂತೆ ಹಾಗೂ ಈ ಕೆಳಗೆ ಸೂಚಿಸಿರುವ ಕರ್ತವ್ಯಗಳಲ್ಲಿನ ಮಕ್ಕಳ ಸುರಕ್ಷತೆಗಾಗಿ ಜವಾಬ್ದಾರಿಗಳನ್ನು ನಿರ್ವಹಿಸುವರು.

ಅಡುಗೆಯನ್ನು ಮಕ್ಕಳಿಗೆ ಊಟ ಬಡಿಸುವ ಅರ್ಧ ಘಂಟೆ ಮುಂಚಿತವಾಗಿ ತಯಾರಿಸಿ ದೊಡ್ಡ ಪಾತ್ರೆಗಳಿಂದ ಚಿಕ್ಕ ಪಾತ್ರೆಗಳಿಗೆ ಬದಲಾಯಿಸಿಕೊಂಡು ಒಂದನೇ ತರಗತಿಯ ಮಕ್ಕಳೂ ಸಹ ಸರಾಗವಾಗಿ ಊಟ ಮಾಡಲು ಸಾಧ್ಯವಾಗುವಷ್ಟು ಬಿಸಿ ಇರುವಂತೆ ನೋಡಿಕೊಂಡು ಬಡಿಸತಕ್ಕದ್ದು. ಅಡುಗೆ ಕೋಣೆಯೊಳಗೆ ಯಾವ ಮಕ್ಕಳೂ ಯಾವುದೇ ಕಾರಣಕ್ಕೂ ಹೋಗದಂತೆ ನಿಷೇಧಿಸುವುದು.ಅಡುಗೆಯವರು ಯಾವುದೇ ಕಾರಣಕ್ಕೂ ದೊಡ್ಡದೊಡ್ಡ ಪಾತ್ರೆಗಳಲ್ಲಿ ತುಂಬಿಕೊಂಡು ಊಟ ಬಡಿಸುವುದು. ಕಡ್ಡಾಯವಾಗಿ ಶಾಲಾ ಕಾರಿಡಾರಿನಲ್ಲಿಯೇ ಅಥವಾ ತರಗತಿ ಕೋಣೆಯೋಳಗೆ ಮಕ್ಕಳು ಕುಳಿತು ಊಟ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು. ಯಾವುದೇ ಕಾರಣಕ್ಕೂ ಮಕ್ಕಳು ಪಾತ್ರೆ ಮುಂದೆ ನಿಂತು ಊಟವನ್ನು ತಟ್ಟೆಗೆ ಹಾಕಿಸಿಕೊಳ್ಳುವುದನ್ನು ನಿಷೇಧಿಸಿದೆ. ಕಾರಿಡಾರ್ ಅಥವಾ ಕೋಣೆ ಯೊಳಗೆ ಊಟ ಬಡಿಸಬೇಕು. ಮಕ್ಕಳು ಕುಳಿತು ಊಟ ಮಾಡಬೇಕು. ಹೆಚ್ಚು ಮಕ್ಕಳಿದ್ದಲ್ಲಿ ಸರದಿ ಪ್ರಕಾರ ಊಟ ನೀಡುವುದು. ಊಟದ ಬೆಲ್ ಆದ ತಕ್ಷಣ ಆಯಾ ತರಗತಿಯ ಶಿಕ್ಷಕರು ಅವರವರ ತರಗತಿ ಕೋಣೆಯೊಳಗೆ ಧಾವಿಸಿ ಮುಂದೆ ನಿಂತು ಮಕ್ಕಳು ತರಗತಿ ಕೋಣೆಯಿಂದ ಹೊರಟು ಹೊರಗಡೆ ಊಟದ ಕಾರಿಡಾರ್ ವರೆಗೆ ಬಂದು ಕ್ರಮವಾಗಿ ಕುಳಿತುಕೊಂಡು ಊಟವನ್ನು ಪಡೆದು ಊಟಮಾಡಿ ಮತ್ತೆ ಕೈ ತಟ್ಟೆ ತೊಳೆದುಕೊಂಡು ತರಗತಿ ಕೋಣೆಗೆ ಹೋಗಿ ಅವರ ತಟ್ಟೆಗಳನ್ನು ಇಡಲು ಹೋಗುವವರೆಗೆ ಉಸ್ತುವಾರಿ ವಹಿಸಲು ತರಗತಿ ಶಿಕ್ಷಕರಿಗೆ ಮುಖ್ಯ ಶಿಕ್ಷಕರು ಸೂಕ್ತ ಆದೇಶವನ್ನು ಮೆಮೊ ಮೂಲಕ ನೀಡಲು ಸೂಚಿಸಿದೆ. ತರಗತಿ ಶಿಕ್ಷಕರು ರಜೆ ಇದ್ದಾಗ ಈ ಉಸ್ತುವಾರಿ ಕೆಲಸವನ್ನು ಬೇರೆ ಶಿಕ್ಷಕರಿಗೆ ತಪ್ಪದೇ ಬೆಳಗಿನ ಅವಧಿಯಲ್ಲಿಯೇ ಮುಖ್ಯ ಶಿಕ್ಷಕರು ಮೆಮೊ ಮೂಲಕ ಆದೇಶ ನೀಡಬೇಕು.ಯಾವುದೇ ಕೆಲಸವಿದ್ದರೂ ಅದನ್ನು ಬಿಟ್ಟು ಮುಖ್ಯಶಿಕ್ಷಕರು ಹಾಗೂ ತರಗತಿ ಶಿಕ್ಷಕರು/ದೈಹಿಕ ಶಿಕ್ಷಕರು/ಊಟದ ವೇಳೆಯಲ್ಲಿ ಕಡ್ಡಾಯವಾಗಿ ಊಟದ ವಿತರಣೆಯ ಉಸ್ತುವಾರಿ ವಹಿಸಿ, ಯಾವುದೇ ಸಮಸ್ಯೆಯಿಲ್ಲದಂತೆ ಮಕ್ಕಳು ಊಟ ಪಡೆಯುವಂತೆ ಕ್ರಮ ವಹಿಸುವುದು. ಊಟದ ವೇಳೆಯಲ್ಲಿ ಎಲ್ಲಾ ಶಿಕ್ಷಕರು ಹಾಗೂ ಅಡುಗೆಯವರೂ ಕಡ್ಡಾಯವಾಗಿ ಹಾಜರಿದ್ದು, ಮುಂದೆ ನಿಂತು ಊಟದ ಉಸ್ತುವಾರಿ ನಿರ್ವಹಿಸುವುದನ್ನು ಕಡ್ಡಾಯ ಗೊಳಿಸಲಾಗಿದೆ

ತಾಲ್ಲೂಕು ಮಟ್ಟ :

ತಾಲ್ಲೂಕು ಮಟ್ಟದಲ್ಲಿ ಅಸಿಸ್ಟೆಂಟ್ ಕಮಿಷನರ್ ರವರ ನೇತೃತ್ವದಲ್ಲಿ ತಾಲ್ಲೂಕು ಪಂಚಾಯತ್ ನಲ್ಲಿ ಉಸ್ತುವಾರಿ ಹಾಗೂ ಪರಾಮರ್ಶ ಸಮಿತಿ ಇದ್ದು, ಪ್ರತೀ ತ್ರೈ ಮಾಸಿಕಕ್ಕೊಮ್ಮೆ ಸಭೆ ನಡೆಸಲಾಗುತ್ತದೆ. ಜೊತೆಗೆ ಕಾರ್ಯಕ್ರಮದ ಅನುಷ್ಠಾನ ಹಾಗೂ ಮೇಲುಸ್ತುವಾರಿಯನ್ನು ತಾಲ್ಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಗಳು ನಿರ್ವಹಿಸುತ್ತಿದ್ದಾರೆ. ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳ ಅಧೀನದಲ್ಲಿ ಸಹಾಯಕ ನಿರ್ದೇಶಕರು(ಅಕ್ಷರ ದಾಸೋಹ) ಕಾರ್ಯಕ್ರಮದ ಅನುಷ್ಠಾನದಲ್ಲಿ ನೆರವಾಗಲು ಕಾರ್ಯನಿರ್ವಹಿತ್ತಿದ್ದಾರೆ. ಕ್ಷೇತ್ರಶಿಕ್ಷಣಾಧಿಕಾರಿಗಳು ಎಲ್ಲಾ ಶಾಲೆಗಳಿಂದಲೂ ಫಲಾನುಭವಿ ಮಕ್ಕಳ ಸಂಖ್ಯೆಗನುಗುಣವಾಗಿ ಬೇಡಿಕೆ ಮತ್ತು ಉಪಯೋಗಿತಾ ಪ್ರಮಾಣ ಪತ್ರವನ್ನು ಸಂಗ್ರಹಿಸಿ ಕ್ರೋಢೀಕರಿಸಿ, ಜಿಲ್ಲಾ ಉಪನಿರ್ದೇಶಕರು(ಆಡಳಿತ) ಇವರಿಗೆ ತಲುಪಿಸುವುದು. ಅವರು ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರ ಸಹಾಯ ಪಡೆದುಕೊಂಡು ಶಾಲಾ ಮಕ್ಕಳ ದಾಖಲಾತಿ, ಹಾಜರಾತಿ ಮತ್ತು ಫಲಾನುಭವಿಗಳ ವಿವರವಾದ ಮಾಹಿತಿಯನ್ನು ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರಿಗೆ ತಲುಪಿಸುವುದು. ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಯಿಂದ ಪಡೆದುಕೊಂಡ ಮಾತ್ರೆಗಳನ್ನು ಸಿ.ಆರ್.ಪಿ.ಗಳ ಮೂಲಕ ಶಾಲಾ ಮಕ್ಕಳಿಗೆ ವಿತರಿಸಬೇಕು ಕ್ಷೇತ್ರಶಿಕ್ಷಣಾಧಿಕಾರಿಗಳು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಸ್. ಡಿ. ಎಂ. ಸಿ. ಹಾಗೂ ಶಾಲಾ ಮುಖ್ಯಶಿಕ್ಷಕರರುಗಳೊಂದಿಗೆ ಉತ್ತಮ ಹೊಂದಾಣಿಕೆಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಬಿ.ಆರ್.ಸಿ.,ಇ.ಸಿ.ಒ./ ಸಿ.ಆರ್.ಪಿ. ಇವರ ಸೇವೆಯನ್ನು ಕಾರ್ಯಕ್ರಮಕ್ಕೆ ಉಪಯೋಗಿಸಿ ಕೊಳ್ಳಬೇಕಾಗುತ್ತದೆ.

ಜಿಲ್ಲಾ ಮಟ್ಟ :

ಜಿಲ್ಲಾಧಿಕಾರಿಗಳ/ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಚಾಲನಾ ಮತ್ತು ಪರಾಮರ್ಶನ ಸಮಿತಿ ಇದ್ದು, ಪ್ರತೀ ತ್ರೈಮಾಸಿಕಕ್ಕೊಮ್ಮೆ ಸಭೆ ನಡೆಸಲಾಗುತ್ತದೆ ಹಾಗೂ ಇದರಿಂದ ಕಾರ್ಯಕ್ರಮದ ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ನಿರ್ವಹಿಸಲಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮಕ್ಕೆ ಉಪನಿರ್ದೇಶಕರು ಸಹಕಾರ ನೀಡಬೇಕು. ಇವರು ಜಿಲ್ಲೆ ಮತ್ತು ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು. ಆಹಾರ ಸಾಮಗ್ರಿಗಳು ಹಾಗೂ ಅನುದಾನದ ಉಪಯೋಗಿತ ಪ್ರಮಾಣ ಪತ್ರಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಸಂಗ್ರಹಿಸಿ, ಕ್ರೋಢೀಕರಿಸಿ, ರಾಜ್ಯ ಅನುದಾನದ ಯೋಜನೆ ಕೇಂದ್ರ ಕಛೇರಿಯ ಜಂಟಿ ನಿರ್ದೇಶಕರಿಗೆ ತಲುಪಿಸಬೇಕು. ಅಡುಗೆ ಕೋಣೆ ನಿರ್ಮಾಣ ಹಾಗೂ ಪ್ರಗತಿಯನ್ನು ಪರಿಶೀಲಿಸಬೇಕು. ಅಗ್ನಿನಂದಕ ಅಳವಡಿಕೆ ಬಗ್ಗೆ ಗಮನಹರಿಸಿ ಕಡ್ಡಾಯವಾಗಿ ಎಲ್ಲಾ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲೂ ಅಳವಡಿಸಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.

ಧ್ಯೇಯೋದ್ದೇಶಗಳು :

    • ಶಾಲಾ ಮಕ್ಕಳ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸುವುದು.
    • ಶೈಕ್ಷಣಿಕ ವರ್ಷದಲ್ಲಿ ಮಧ್ಯೆ ಮಧ್ಯೆ ಶಾಲೆಯನ್ನು ತೊರೆಯದಂತೆ ತಡೆಯುವುದು.
    • ಶಾಲಾ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದು.
    • ಬರಪೀಡಿತ ಪ್ರದೇಶಗಳಿಗೆ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯನ್ನು ನೀಡಲಾಗುತ್ತಿದೆ.
    • ಪೌಷ್ಠಿಕಾಂಶ ಹೆಚ್ಚಿಸುವುದರ ಮೂಲಕ ಶಾಲಾ ಮಕ್ಕಳ ಆರೋಗ್ಯವನ್ನು ಅಭಿವೃದ್ಧಿಗೊಳಿಸುವುದು.
    • ಸಾಮಾಜಿಕ ಸಮಾನತೆಯನ್ನು ಅಭಿವೃದ್ಧಿ ಪಡಿಸಿ ತನ್ಮೂಲಕ ರಾಷ್ಟ್ರೀಯ ಭಾವೈಕ್ಯತೆಯನ್ನು ಮಕ್ಕಳಲ್ಲಿ ಮೂಡಿಸುವುದು.
    • ಕ್ಷೀರ ಭಾಗ್ಯ ಯೋಜನೆಯಡಿ ವಾರದಲ್ಲಿ ಐದು ದಿನ 150 ಎಂ.ಎಲ್ ಹಾಲು ವಿತರಿಸುವುದು.

ಕಾರ್ಯಕ್ರಮಗಳು,ಯೋಜನೆ ಮತ್ತು ಸವಲತ್ತುಗಳು

  1. ಮಧ್ಯಾಹ್ನ ಉಪಹಾರ ಯೋಜನೆ
  2. ಕ್ಷೀರ ಭಾಗ್ಯ ಯೋಜನೆ.
  3. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (RBSK)

A. ಮಧ್ಯಾಹ್ನ ಉಪಹಾರ ಯೋಜನೆ

ಇತರೆ ಇಲಾಖೆಗಳ ಸಹಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ :

ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನದ ಜವಾಬ್ದಾರಿಯು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯದ್ದಾಗಿರುತ್ತದೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೇಡ್-1 ಹುದ್ದೆಯ ಅಧಿಕಾರಿಯ ಸಹಕಾರದೊಂದಿಗೆ, ಈ ಕಾರ್ಯಕ್ರಮವು ನಡೆಯುತ್ತದೆ.
ತಾಲ್ಲೂಕು ಮಟ್ಟದಲ್ಲಿ ಗ್ರೂಪ್-ಬಿ ಹುದ್ದೆಯ ಅಧಿಕಾರಿಯ ಸಹಕಾರದೊಂದಿಗೆ, ತಾಲ್ಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿಯು ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿರುತ್ತದೆ

ಆರೋಗ್ಯ ಇಲಾಖೆ :

ಮಧ್ಯಾಹ್ನ ಬಿಸಿಯೂಟದ ಜೊತೆಗೆ ಹೆಚ್ಚುವರಿ ಪೌಷ್ಟಿಕಾಂಶವುಳ್ಳ ಮಾತ್ರೆಗಳನ್ನು ಸಹ ನೀಡಲಾಗುತ್ತಿದೆ. ಇದನ್ನು Karnataka Drugs Logistics and Warehousing Society; ಯ ಸಹಯೋಗದೊಂದಿಗೆ ಸರಬರಾಜು ಮಾಡಲಾಗುತ್ತಿದೆ. ಮಾತ್ರೆಗಳನ್ನು ಶಿಕ್ಷಣ ಇಲಾಖೆಯಿಂದ ಬಂದ ಬೇಡಿಕೆಗೆ ಅನುಸಾರವಾಗಿ ತಾಲ್ಲೂಕು ಮಟ್ಟದಲ್ಲಿ ಪೂರೈಕೆ ಮಾಡಿದ ನಂತರ ಶಾಲೆಗಳಿಗೆ ಮರುಹಂಚಿಕೆಯಾಗುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯಾಜ್ಯಗಳ ಇಲಾಖೆ :

ಈ ಇಲಾಖೆಯು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲು ಎ.ಪಿ.ಎಲ್. ಆಹಾರ ಧಾನ್ಯಗಳನ್ನು ಪೂರೈಸುವ ಕೆಲಸ ಮಾಡುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ :

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮವು ಬಿಸಿಯೂಟ ಕಾರ್ಯಕ್ರಮಕ್ಕೆ ಬೇಳೆ, ಎಣ್ಣೆ, ಉಪ್ಪು ಇನ್ನಿತರ ಆಹಾರಧಾನ್ಯಗಳನ್ನು ಪೂರೈಸುವ ಜವಾಬ್ದಾರಿ ಹೊಂದಿದ್ದು, ಆಹಾರಧಾನ್ಯಗಳ ಬೇಡಿಕೆಗನುಸಾರ ಯಾವುದೇ ಅಡೆತಡೆಗಳಿಲ್ಲದೆ ಯೋಜನೆಗಳನ್ನು ಕಾರ್ಯಗತಗೊಳಿಸುವುದು ಇದರ ಜವಾಬ್ದಾರಿಯಾಗಿದೆ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಹಾರಧಾನ್ಯಗಳ ಬೇಡಿಕೆಗೆ ಅನುಸಾರವಾಗಿ 02 ತಿಂಗಳ ಮುಂಗಡ ಹಣ ಬಿಡುಗಡೆ ಮಾಡಿ ಮುಂದಿನ ತಿಂಗಳುಗಳಲ್ಲಿ ಸರಬರಾಜು ಮಾಡುವ ಆಹಾರಧಾನ್ಯಗಳ ಬಿಲ್ಲಿಗೆ ಈ ಹಣವನ್ನು ಸರಿದೂಗಿಸುತ್ತದೆ.

ಭಾರತೀಯ ಆಹಾರ ನಿಗಮ :

ಭಾರತೀಯ ಆಹಾರ ನಿಗಮವು 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ಅಕ್ಕಿ, ಗೋಧಿಯನ್ನು ಎಫ್.ಸಿ.ಐ. ಗೋದಾಮಿನಲ್ಲಿ ಶೇಖರಿಸಿಟ್ಟುಕೊಂಡು, ಹಂಚಿಕೆ ಮಾಡುವ ಕಾರ್ಯ ನಿಗಮದ್ದಾಗಿರುತ್ತದೆ.
ಆಹಾರ ಸರಬರಾಜಿನಲ್ಲಿ ಯಾವುದೇ ನಿಲುಗಡೆಗೆ ಆಸ್ಪದವಿಲ್ಲದಂತೆ ತ್ರೈಮಾಸಿಕಕ್ಕೆ ಅಗತ್ಯವಿರುವ ಆಹಾರಧಾನ್ಯಗಳನ್ನು ಸರಬರಾಜು ಮಾಡುವ ಕಾರ್ಯವನ್ನು ನಿರ್ವಹಿಸುತ್ತದೆ. ಎಫ್.ಎ.ಕ್ಯೂ. ಆಧಾರದ ಮೇಲೆ ಮಧ್ಯಾಹ್ನ ಉಪಹಾರ ಯೋಜನೆಗೆ ಎಫ್.ಸಿ.ಐ.ಯು ಅತ್ಯುತ್ತಮ ಆಹಾರಧಾನ್ಯಗಳನ್ನು ಸರಬರಾಜು ಮಾಡುತ್ತದೆ.
ಶಿಕ್ಷಣ ಇಲಾಖೆ, ಭಾರತೀಯ ಆಹಾರ ನಿಗಮದ ಅಧಿಕಾರಿಗಳನ್ನೊಳಗೊಂಡಂತೆ ಜಿಲ್ಲಾಧಿಕಾರಿಗಳ ನೇತೃತ್ವದ ಆಹಾರ ಗುಣಮಟ್ಟ ಪರಿಶೀಲನಾ ತಂಡ ಆಹಾರಧಾನ್ಯ ಸರಬರಾಜಿನ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರವಿದೆಯೇ ಎಂದು ಪರಿಶೀಲಿಸಿ ವರದಿ ನೀಡುತ್ತದೆ ಹಾಗೂ ಆಹಾರಧಾನ್ಯಗಳ ಮಾದರಿಯನ್ನಿಟ್ಟುಕೊಂಡು ಪರಿಶೀಲಿಸುತ್ತದೆ.

B. ಕ್ಷೀರ ಭಾಗ್ಯ ಯೋಜನೆ :

ಕರ್ನಾಟಕ ಸರ್ಕಾರವು 2013-14ನೇ ಸಾಲಿನ 01-08-2013 ರಿಂದ 1 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಲ್ಲಾ ಮಕ್ಕಳಗೆ 18 ಗ್ರಾಂ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿದ 150 ಮಿ.ಲೀ. ಹಾಲನ್ನು ವಾರದಲ್ಲಿ 03 ದಿನ (ಒಂದು ದಿನ ಬಿಟ್ಟು ಒಂದು ದಿನ ) ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ದಿನಾಂಕ: 01-08-2013 ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಗೆ ರಾಜ್ಯಾದ್ಯಂತ ಚಾಲನೆ ನೀಡಿದರು. ದಿನಾಂಕ: 17-07-2017 ರಿಂದ ವಾರದ ಐದು ದಿನಗಳಿಗೆ ಹಾಲು ನೀಡಲು ಆದೇಶಿಸಿ ವಿಸ್ತರಿಸಿದೆ.
ಕ್ಷೀರಭಾಗ್ಯ ಯೋಜನೆಗೆ ಕರ್ನಾಟಕ ಹಾಲು ಮಹಾಮಂಡಳಿಯು ಕಾರ್ಯಕ್ರಮಕ್ಕೆ ಅಗತ್ಯ ಕೆನೆಭರಿತ ಹಾಲಿನ ಪುಡಿಯನ್ನು ಶಾಲಾ ಬಾಗಿಲಿಗೆ ಸರಬರಾಜು ಮಾಡುತ್ತದೆ.

C. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ

2015-16ನೇ ಸಾಲಿನಿಂದ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ (ಈ ಹಿಂದೆ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗುತ್ತಿತ್ತು). ಇದರಲ್ಲಿ ವರ್ಷಪೂರ್ತಿ ತಪಾಸಣಾ ಕಾರ್ಯಕ್ರಮವು 1ರಿಂದ 10ನೇ ತರಗತಿಯ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಮುಂದುವರೆಸಲಾಗುತ್ತದೆ. ಎನ್.ಆರ್.ಎಚ್.ಎಮ್ ನಡಿ ಪ್ರತಿ ತಾಲ್ಲೂಕಿನಲ್ಲಿ ಒಬ್ಬರು ವೈದ್ಯಾಧಿಕಾರಿ ಹಾಗೂ ಒಬ್ಬ ನರ್ಸ್ ಒಳಗೊಂಡಂತೆ 2 ತಂಡಗಳನ್ನು ರಚಿಸಿಕೊಂಡು ಮಕ್ಕಳ ತಪಾಸಣೆ ನಡೆಸಲಾಗಿದೆ. 2016-17ನೇ ಸಾಲಿನಲ್ಲಿ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಆಡಳಿತ ವ್ಯವಸ್ಥೆ:

ಕಾರ್ಯಕ್ರ ಮದ ಅನುಷ್ಠಾ ನ/ನಿರ್ಯಹಣೆ

ಕೇಂದ್ರ ಮಟ್ಟದ ಆಡಳಿತ: ಕೇಂದ್ರ ಸರ್ಕಾರದ (ಎಂ.ಎಚ್.ಆರ್.ಡಿ) ಅಧೀನದಲ್ಲಿ ರಾಜ್ಯದ ಶಿಕ್ಷಣ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರವರ ಮುಖ್ಯಸ್ಥರಾಗಿರುತ್ತಾರೆ.

ರಾಜ್ಯ ಮಟ್ಟದ ಆಡಳಿತ: ಸರ್ಕಾರದ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇವರ ಅಧೀನದಲ್ಲಿ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯನಿರ್ವಹಿಸುತ್ತದೆ ಹಾಗೂ ಇವರ ಅಧೀನದಲ್ಲಿ ಜಂಟಿ ನಿರ್ದೇಶಕರು ಮಧ್ಯಾಹ್ನ ಉಪಹಾರ ಯೋಜನೆಗೆ ಮುಖ್ಯಸ್ಥರಾಗಿರುತ್ತಾರೆ.

ಜಿಲ್ಲಾ ಮಟ್ಟದಲ್ಲಿ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ, ಗದಗ ರವರ ಅಧೀನದಲ್ಲಿ ಉಪನಿರ್ದೇಶಕುರ (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಹಾಗೂ ಶಿಕ್ಷಣಾಧಿಕಾರಿಗಳ ಅಕ್ಷರ ದಾಸೋಹ ಕಾರ್ಯಕ್ರಮ ಜಿ.ಪಂ. ಗದಗರವರು ಮುಖ್ಯಸ್ಥರಾಗಿರುತ್ತಾರೆ.

ತಾಲ್ಲೂಕ ಮಟ್ಟದಲ್ಲಿ:
ಕಾರ್ಯನಿರ್ವಾಕ ಅಧಿಕಾರಿಗಳು ತಾಲ್ಲೂಕ ಪಂಚಾಯತರವರ ಅಧೀನದಲ್ಲಿ ಸಹಾಯಕ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಕ್ರಮದ ಅನುಷ್ಠಾನದಲ್ಲಿ ಮುಖ್ಯಸ್ಥರಾಗಿರುತ್ತಾರೆ.

ಶಾಲಾ ಮಟ್ಟದಲ್ಲಿ:
ಆಯಾ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ನೋಡಲ್ ಶಿಕ್ಷಕರು (ಮ.ಉ.ಯೋ) ಹಾಗೂ ಮುಖ್ಯ ಅಡುಗೆ ಸಹಾಯರಕು ಮತ್ತು ತಾಯಂದಿರ ಸಮಿತಿ ಅನುಷ್ಠಾನ ಮಾಡುತ್ತಿದೆ.

 

ಸಂಪರ್ಕ

ಮುಖ್ಯ ಕಚೇರಿ 

ಜಂಟಿ ನಿರ್ದೇಶಕರು(ಮ.ಉ.ಯೋ),

ಅಕ್ಷರ ದಾಸೋಹ

ದೂರವಾಣಿ: 080-22242943, ಫ್ಯಾಕ್ಸ್:080-22271998

 ಮಿಂಚಂಚೆ ವಿಳಾಸ:

ಜಿಲ್ಲಾ ಕಚೇರಿ 

ಶಿಕ್ಷಣಾಧಿಕಾರಿಗಳು,

ಮಿನಿ ವಿಧಾನ ಸೌಧ

ಹುಬ್ಬಳ್ಳಿ ರಸ್ತೆ,ಗದಗ – 582103

ದೂರವಾಣಿ: 08372-221757, 

ಮಿಂಚಂಚೆ ವಿಳಾಸ: 

ತಾಲೂಕಾವಾರು ಶಿಕ್ಷಣಾಧಿಕಾರಿಗಳ ಸಂಪರ್ಕ

ಗದಗ: 

 

ಮುಂಡರಗಿ:
ನರಗುಂದ: 
ರೋಣ: 
ಶಿರಹಟ್ಟಿ: 

ಸಂಪರ್ಕ ಸಮಯ : ಬೆಳ್ಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ